ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ :

      ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ  ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

     ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್​ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್​ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ. 

     ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದ ಬಳಿಯ ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಅವಘಡ ಸಂಭವಿಸಿತ್ತು. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಬಾಲಕರು ಮತ್ತು ಓರ್ವ ಯುವತಿ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದ ಘಟನೆ ಇತ್ತೀಚೆಗೆ ನಡೆದಿತ್ತು.

     ಮೂವರು ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ಎಂದು ಗುರುತಿಸಲಾಗಿತ್ತು. ಬಸಮ್ಮ ಕೊಣ್ಣೂರ (21) ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು (15) ಮೃತರು. ಈ ಮೂವರು ಒಂದೇ ಕುಟುಂಬದವರು ಎನ್ನಲಾಗಿದೆ. 

    ಸುದ್ದಿ ತಿಳಿದು ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾಲುವೆ ನೀರಲ್ಲಿ ನಾಪತ್ತೆಯಾದ ಮೂವರ ಶೋಧಕ್ಕೆ ಮುಂದಾಗಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿತ್ತು. 

Recent Articles

spot_img

Related Stories

Share via
Copy link