ದಾವಣಗೆರೆ:
ಹೊನ್ನಾಳಿ ತಾಲೂಕು ಕುಂದೂರು ಗ್ರಾಮದಲ್ಲಿ ಕಂದಾಯ ಸಚಿವ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಗ್ರಾಮ ವಾಸ್ತವ್ಯ ಮಾಡಿ ಮುಂಜಾನೆಯಿಂದಲೇ ಕುಂದೂರು ಗ್ರಾಮದ ಬಸ್ ನಿಲ್ದಾಣ ಹಾಗೂ ಸುತ್ತಮುತ್ತ ಜಗಲಿ ಕಟ್ಟೆಯ ಬಳಿ ಜನಸ್ತೋಮದ ಮಧ್ಯೆ ಕುಳಿತು ಟೀ ಸ್ವೀಕರಿಸಿ ಅವರ ಯೋಗಕ್ಷೇಮ ವಿಚಾರಿಸಿದರು.ರಾಜ್ಯ ಸರ್ಕಾರದ ಕಾರ್ಯವೈಕರಿ ಹೇಗಿದೆ ಹಾಗೂ ವೃದ್ಧಾಪ್ಯ ವೇತನ ಸರಿಯಾಗಿ ಬರುತ್ತಿದೆಯೇ ಸಮಸ್ಯೆಗಳಿವೆಯೇ ಎಂದು ಗ್ರಾಮಸ್ಥರಲ್ಲಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
