ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ರೋಹಿಣಿ ಸಿಂಧೂರಿ…!

ಬೆಂಗಳೂರು:

       ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ  ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

     ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಸದ್ಯ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರಾಗಿದ್ದಾರೆ. ಬುಧವಾರ ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.

    ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ.

     ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ್‌ ಜಿ ಎನ್ನುವವರನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ  ನಿರ್ದೇಶಕರಾಗಿ ನಿಯೋಜಿಸಲಾಗಿದೆ.

     ಎಸ್‌ ವಿಕಾಶ್‌ ಕಿಶೋರ್‌ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿ ನಗರದ ವಲಯ ಆಯ್ತುಕ್ತರಾಗಿ ನಿಯೋಜನೆ ಮಾಡಲಾಗಿದೆ. ಇದಕ್ಕೂ ಮುನ್ನ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದರು.ಹುದ್ದೆ ನಿಯೋಜನೆ ಕಾದಿದ್ದ ಲತಾ ಕುಮಾರಿ ಅವರನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಹುದ್ದೆ ನಿಯೋಜನೆ ಕಾದಿದ್ದ ಸಿಎಸ್‌ ಸುದೀಂದ್ರ ಅವರನ್ನು ಕರಕುಶಲ ಮತ್ತು ಕೈಮಗ್ಗ ಇಲಾಖೆ ನಿರ್ದೇಶಕರ ಹುದ್ದೆಗೆ ನಿಯೋಜನೆ ಮಾಡಲಾಗಿದೆ.

    ಸಂಗಪ್ಪ ಅವರನ್ನು ಕಿಯೋನಿಸ್ಕ್‌ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.ರೇಷ್ಮೆ ಸಂಶೋಧನಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ಸ್‌ ಕಾರ್ಪೋರೇಷನ್‌ ಕಾರ್ಯಕಾರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap