ಮಂಡ್ಯ:
ಮಂಡ್ಯದಲ್ಲಿ ಹಾವಳಿ ಎಬ್ಬಿಸಿ ಹಲವು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸುಭಾಷ್ ಅಲಿಯಾಸ ಸುಬ್ಬು ಎಂಬ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ. ಮಂಡ್ಯ ತಾಲೂಕಿನ ಬಿ. ಹೊಸೂರು ಸಮೀಪ ಕಾಲಿಗೆ ಗುಂಡು ಹೊಡೆದು ಆರೋಪಿ ಸುಭಾಷ್ನನ್ನು ಬಂಧಿಸಲಾಗಿದೆ.
ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿ ಸುಭಾಷ್ ಭಾಗಿಯಾಗಿದ್ದ. ಬಿ. ಹೊಸೂರು ಸಮೀಪ ಆತ ತಲೆಮರೆಸಿಕೊಂಡಿರುವ ಮಾಹಿತಿ ಗೊತ್ತಾಗಿ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಮಂಡ್ಯ ಪೂರ್ವ ಠಾಣೆಯ ಪಿಎಸ್ಐ ಶೇಷಾದ್ರಿ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಗಾಯಾಳು ಆರೋಪಿಯನ್ನು ಬಂಧಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
