ಮದ್ದೂರಿನಲ್ಲಿ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ…!

ಮಂಡ್ಯ:

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಭೀಕರವಾಗಿ ಕೊಲೆ  ಮಾಡಿರುವ ಘಟನೆ ಮಂಡ್ಯ  ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಜರುಗಿದೆ. ರೌಡಿಶೀಟರ್  ಅರುಣ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಎಂ.ಟಿ.ಆರ್ ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್‌ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿ ಜಗಳವಾಡಿಕೊಂಡಿದ್ದಾರೆ.

   ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆಸ್ತೂರು ಪೋಲೀಸರು ಶವವನ್ನು ಮಂಡ್ಯ ಮಿಮ್ಸ್‌ಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Recent Articles

spot_img

Related Stories

Share via
Copy link