ರಾಣೆಬೆನ್ನೂರು :
ನೂಕಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಎಸ್ಎಫ್ಐ ನೇತೃತ್ವದಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಎಸ್ಎಫ್ಐ ತಾಲ್ಲೂಕ ಕಾರ್ಯದರ್ಶಿ ಬಸವರಾಜ ಬೋವಿ ಮಾತನಾಡಿ, ನೂಕಾಪುರ ಗ್ರಾಮದಿಂದ ರಾಣೆಬೆನ್ನೂರು ಗ್ರಾಮಕ್ಕೆ ನಿತ್ಯವೂ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಣೆಬೆನ್ನೂರು ನಗರಕ್ಕೆ ಬರುತ್ತಿದ್ದು ಸಮಯಕ್ಕೆ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಈ ಸಂಬಂಧ ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡಾ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಆದ್ದರಿಂದ ಪ್ರತಿಭಟನೆ ದಾರಿ ಅನಿವಾರ್ಯ ಎಂದರು. ಕೂಡಲೆ ನೂಕಾಪುರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆ ನಂತರ ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಅರುಣ, ದೇವರಾಜ, ರಾಮು, ಗಣೇಶ, ರಘು ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
