ಮುಂಬೈ:
ಬಾಲಿವುಡ್ ನಟ ಸಲ್ಮಾನ್ ಖಾನ್ ಜೀವಂತವಾಗಿ ಇರಬೇಕಾದರೆ ಮತ್ತು ಲಾರೆನ್ಸ್ ಬಿಷ್ಣೋಯಿ ಜೊತೆಗಿನ ಧೀರ್ಘ ವೈರತ್ವವನ್ನು ಕಳೆದುಕೊಳ್ಳಬೇಕಾದರೆ ರೂ.5 ಕೋಟಿ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದ ವ್ಯಕ್ತಿಯ ಮೊಬೈಲ್ ಸಂಖ್ಯೆಯಿಂದ ಮುಂಬೈ ಸಂಚಾರ ಪೊಲೀಸರಿಗೆ ಕ್ಷಮೆಯಾಚನೆಯ ಸಂದೇಶ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 18 ರಂದು ಮುಂಬೈ ಸಂಚಾರಿ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆಗೆ ಆರಂಭಿಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿತ್ತು. ಕೆಲವು ದಿನಗಳ ನಂತರ ಮುಂಬೈ ಸಂಚಾರ ಪೊಲೀಸರಿಗೆ ಅದೇ ಸಂಖ್ಯೆಯಿಂದ ಮತ್ತೊಂದು ಸಂದೇಶ ಬಂದಿದ್ದು, ಅದರಲ್ಲಿ ಬೆದರಿಕೆಯೊಡ್ಡಿದ್ದ ವ್ಯಕ್ತಿಯು ತಪ್ಪಾಗಿ ಸಂದೇಶವನ್ನು ಕಳುಹಿಸಲಾಗಿದೆ ಎಂದು ಹೇಳಿ ಕ್ಷಮೆಯಾಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದೇಶ ಕಳುಹಿಸಿದ ವ್ಯಕ್ತಿಯ ಸ್ಥಳವನ್ನು ಜಾರ್ಖಂಡ್ ಎಂದು ಗುರುತಿಸಲಾಗಿದೆ. ಸಂದೇಶ ಕಳುಹಿಸಿದ ವ್ಯಕ್ತಿ ತಾನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ಗೆ ಹತ್ತಿರವಾಗಿದ್ದು, ಸಲ್ಮಾನ್ ಖಾನ್ ಜೀವಂತವಾಗಿ ಇರಬೇಕಾದರೆ ಮತ್ತು ಬಿಷ್ಣೋಯಿ ಗ್ಯಾಂಗ್ ಜೊತೆಗಿನ ವೈರತ್ವವನ್ನು ಕಳೆದುಕೊಳ್ಳಬೇಕಾದರೆ ರೂ. 5 ಕೋಟಿ ನೀಡಬೇಕು. ಈ ಸಂದೇಶವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಸಂದೇಶದಲ್ಲಿ ತಿಳಿಸಲಾಗಿತ್ತು.ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ಬೆನ್ನಲ್ಲೇ ಬಂದ ಸಂದೇಶದ ಬಗ್ಗೆ ವರ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
