ಬೆಂಗಳೂರು :
ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ ಗೆಳೆಯ ನವೀನ್ ಜೊತೆಗೆ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ನಟ ಸಂಚಾರಿ ವಿಜಯ್ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತಗೊಂಡಿದ್ದರು. ತಲೆಯ ಎಡಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಕೂಡಲೇ ಅವರನ್ನು ನಟ ಸುದೀಪ್ ಮನವಿ ಮೇರೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮೂಲಕ ರಕ್ತಸ್ರಾವವನ್ನು ಸರಿ ಮಾಡಲಾಗಿತ್ತು.
ಐಸಿಯುನಲ್ಲಿ ಇಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ, ಬ್ರೈನ್ ಸ್ಟ್ರೋಕ್ ಉಂಟಾಗಿ, ಅವರು ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದ್ದರು. ಈ ಎಲ್ಲಾ ಮಾಹಿತಿಯ ನಂತರ, ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಅಂಗಾಂಗ ದಾನ
ಸಮಾಜದ ಒಳಿತಿಗಾಗಿ ವಿಜಯ್ ದುಡಿಯುತ್ತಿದ್ದ. ಹೀಗಾಗಿ ಅವರ ಅಂಗಾಂಗವನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದೇವೆ ಎಂದು ಸಹೋದರ ಸಿದ್ದೇಶ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
