ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಸುದ್ದಿಗೋಷ್ಠಿ

ಬೆಂಗಳೂರು:

   SDPI ರಾಷ್ಟ್ರೀಯ ಅಧ್ಯಕ್ಷರನ್ನು ED ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಇಂದು ಬೆಂಗಳೂರಿನ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದಂತಹ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ರವರು ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ. ಕೆ. ಫೈಝಿ ರವರನ್ನು ಕೂಡಲೆ ಬಿಡುಗಡೆ ಮಾಡಲು ಆಗ್ರಹಿಸಿದರು.

   ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಕ್ಸ್ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಆಂದೋಲನವನ್ನು ಹಿಮ್ಮೆಟ್ಟಿಸುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಷಡ್ಯಂತ್ರದ ಭಾಗವಾಗಿದೆ. ಬಿಜೆಪಿ ನೇತೃತ್ವದ NDA ಸರಕಾರ ED, NIA ಮೂಲಕ ನಮ್ಮನ್ನು ಈ ಹೋರಾಟದಿಂದ ಒಂದು ಇಂಚನ್ನು ಸಹ ಹಿಂದೆ ಸರಿಸಲು ಸಾಧ್ಯವಿಲ್ಲ.ನಮ್ಮ ಹೋರಾಟ ಇನ್ನಷ್ಟು ಬಲಗೊಳ್ಳಲಿದೆ ಎಂದರು.

   ದೇಶದಲ್ಲಿ ವಕ್ಸ್ ಮಸೂದೆ ವಿರುದ್ಧ ಶಕ್ತವಾದ ಹೋರಾಟ ದೇಶಾದ್ಯಂತ SDPI ನೇತೃತ್ವದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಕೇಂದ್ರ ಮೋದಿ ಸರ್ಕಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ED ಯ ಮೂಲಕ ಅಕ್ರಮವಾಗಿ ಬಂಧಿಸಿದೆ. ಈ ಬಂಧನವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ನಡೆಯಾಗಿದ್ದು ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ಮೂಲಕ ಖಂಡಿಸುತ್ತದೆ. ಕೇಂದ್ರ ಸರ್ಕಾರ ತನ್ನ ಜನ ವಿರೋಧಿ ನಡೆಯಿಂದ ಹಿಂದೆ ಸರಿದು ಕೂಡಲೇ MK ಫೈಝಿ ಅವರನ್ನು ಬಿಡುಗಡೆ ಮಾಡಬೇಕು ಎಂದು ತಾಕೀತು ಮಾಡುತ್ತಿದ್ದೇವೆ. ಒಂದು ವೇಳೆ ಇದೇ ರೀತಿ ಮುಂದುವರಿದರೆ ಈ ಪ್ರತಿಭಟನೆ ಇನ್ನಷ್ಟು ಶಕ್ತಗೊಳ್ಳಲಿದೆ ಎಂಬ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುತ್ತಿದ್ದೇವೆ ಎಂಬ ಎಚ್ಚರಿಕೆಯನ್ನೂ ನೀಡಿದರು.

    ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮುಜಾಹಿದ್ ಪಾಷಾ ಹಾಗೂ ಅಪ್ಪರ್ ಕೊಡ್ಲಿಪೇಟ್ ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link