ಬೆಂಗಳೂರು:
ಹೋಟೆಲ್ ನಲ್ಲಿ ಕಳ್ಳತನ ಮಾಡಲು ಬಂದಿದ್ದ ವೇಳೆ ದುಷ್ಕರ್ಮಿಗಳು ಸೆಕ್ಯೂರಿಟಿ ಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ, ಆನೆಕಲ್ ನ ಹೊಸೂರು ದರ್ಗಾದಲ್ಲಿ ನಡೆದಿದೆ. ತಿರುಣಾಮಲೈ ಮೂಲದ ದಾಮೋದರ್ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಹೂಸೂರು ದರ್ಗಾ ಬಳಿ ಇರುವ ರಾಜಭೋಜನಂ ಎಂಬ ಹೋಟೆಲ್ ನಲ್ಲಿ ದಾಮೋದರ್ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಕಳ್ಳರು ಮೇಲ್ಚಾವಣಿ ಒಡೆದು ಒಳ ಪ್ರವೇಶಿಸಿದ್ದಾರೆ.
ಈ ವೇಳೆ ದಾಮೋದರ ಎಚ್ಚರಗೊಂಡು ರೂಮ್ ನಿಂದ ಹೊರಗೆ ಬಂದಾಗ ಕಳ್ಳರು ಚಾಕುನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ಹೊಟೆಲ್ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/02/Capture-261.gif)