ಬೆಂಗಳೂರು:
ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.
ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ. ಈ ಮುಂಚೆ ಜುಲೈ 3 ರಿಂದ ಜುಲೈ 14 ವರೆಗೆ ವಿಧಾನಮಂಡಲ ಅಧಿವೇಶನ ನಿಗದಿಯಾಗಿತ್ತು. ಇದೀಗ ಅದನ್ನು 21ರ ವರೆಗೆ ವಿಸ್ತರಿಸಲಾಗಿದೆ.
ಇದಕ್ಕೆ ಒಪ್ಪದ ಬಿಜೆಪಿ ಸ್ಪೀಕರ್ ಯು.ಟಿ.ಖಾದರ್ ಓನ್ ಸೈಡ್ ಸ್ಪೀಕರ್, ಓನ್ ಸೈಡ್ ಸ್ಪೀಕರ್ ಎಂದು ಘೋಷಣೆ ಕೂಗಲು ಆರಂಭಿಸಿದರು. ಬಿಜೆಪಿ ಗದ್ದಲ ಮುಂದುವರಿದ ಹಿನ್ನೆಲೆ ಕಲಾಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದ್ದಾರೆ
ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ ಸದಸ್ಯರ ಧರಣಿ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.