ಬರಗೂರು :
ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ಶಿರಾ ತಾಲ್ಲೂಕಿನ ಹುಲಿಕುಂಟೆ ಹೋಬಳಿಯ ವೀರಬೊಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕುರಿಗಳ ಮಾಲೀಕ ವೀರಬೊಮ್ಮನಹಳ್ಳಿ ಗ್ರಾಮದ ದೊಡ್ಡಮನೆ ಮಹಾಲಿಂಗಪ್ಪ ಎಂಬುವರು ಸುಮಾರು 35 ಕುರಿಗಳನ್ನು ಸಾಕಿದ್ದರು ಎಂದು ಹೇಳಲಾಗಿದೆ. ಪ್ರತಿ ದಿನದಂತೆ ಮಂಗಳವಾರವೂ ಕುರಿಗಳನ್ನು ಮೇಯಿಸಲು ಹೊಲಕ್ಕೆ ಒಡೆದುಕೊಂಡು ಹೋಗಿದ್ದಾರೆ. ಹುಲಿಕುಂಟೆ ರಸ್ತೆ ಮಾರ್ಗದಲ್ಲಿ ತೆರಳುವಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಕುರಿಗಳು ತಂತಿಯನ್ನು ಸ್ಪರ್ಶಿಸಿದ ಪರಿಣಾಮ ನಾಲ್ಕು ಕುರಿಗಳು ಸಾವನ್ನಪ್ಪಿವೆ. ಆಕಸ್ಮಿಕವಾಗಿ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಅವಘಡಕ್ಕೆ ನಾಲ್ಕು ಕುರಿಗಳು ಬಲಿಯಾಗಿವೆ.
ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಇಂತಹ ಅವಘಡ ನಡೆದಿದ್ದು, ಸರ್ಕಾರ ಕೂಡಲೆ ಕುರಿಗಾಹಿಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
