ಹುಬ್ಬಳ್ಳಿ : ಮತ್ತೆ ಕಮಲ ಹಿಡಿದ ಜಗದೀಶ್‌ ಶೆಟ್ಟರ್‌……!

ನವದೆಹಲಿ:

     ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.

    ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ. 

 

Recent Articles

spot_img

Related Stories

Share via
Copy link
Powered by Social Snap