ಜಗದೀಶ್‌ ಶೆಟ್ಟರ್‌ ನಿರ್ಧಾರ ನೋವು ತಂದಿದೆ : ಬೊಮ್ಮಾಯಿ

ಹುಬ್ಬಳ್ಳಿ:

    ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ನಮಗೆ ಆದರ್ಶವಾಗಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡಲು ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಜಗದೀಶ್ ಶೆಟ್ಟರ್  ಹಿರಿಯ ನಾಯಕರು. ಅವರ ರಾಜೀನಾಮೆ ಘೋಷಣೆ ನೋವು ತಂದಿದೆ. ಇಂತಹ ನಿರ್ಧಾರದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದ್ದು, ಈ ಡ್ಯಾಮೇಜ್ ಕಂಟ್ರೋಲ್ ಗೆ ತಂತ್ರ ರೂಪಿಸುತ್ತೇವೆಂದು ಹೇಳಿದರು.

     ಶೆಟ್ಟರ್ ಅವರನ್ನು ಬೇಟಿ ಮಾಡಿದ್ದ ಕೇಂದ್ರ ನಾಯಕತ್ವ ದೊಡ್ಡ ಹುದ್ದೆ ಕೊಡುತ್ತೇವೆಂದು ಹೇಳಿದ್ದರು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರು ಭರವಸೆ ನೀಡಿದ್ದರು. ನಿನ್ನೆ ಕೂಡ ನಾನು ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೆ. ಮುಂದಿನ ಪೀಳಿಗೆ ನಾಯಕತ್ವ ಬೆಳೆಸುವ ಉದ್ದೇಶದಿಂದ ಶೆಟ್ಟರ್ ಅವರಿಗೆ ನೀಡಲಾಗಿಲ್ಲ. ಈಶ್ವರಪ್ಪ ಸೇರಿ ಹಲವು ನಾಯಕರಿಗೂ ಪಕ್ಷ ಟಿಕೆಟ್ ನೀಡಿಲ್ಲ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap