ಜಾತಿ ವಿವಾದ : ಕುಮಾರಸ್ವಾಮಿಗೆ ಶೆಟ್ಟರ್‌ ಟಾಂಗ್‌

ಹುಬ್ಬಳ್ಳಿ

       ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

     ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿಯುತ ಸ್ಥಾನದಲ್ಲಿ ದ್ದವರು ವೈಯಕ್ತಿಕ ವಿಚಾರಗಳನ್ನು ಹಾಗೂ ಜಾತಿಗಳನ್ನು ಇಟ್ಟುಕೊಂಡು ಮಾತನಾಡಬಾರದು. ಜಾತಿಯ ಬಗ್ಗೆ ಮಾತನಾಡುವುದು ರಾಜಕೀಯ ನಾಯಕರಿಗೆ ಶೋಭೆ ತರುವುದಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಭಾಷೆ ಬಳಕೆ, ಜಾತಿ ಬಳಕೆ ಮಾಡುವುದು ಸರಿಯಲ್ಲ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap