ಮುಂಬೈ : ಶಿಲ್ಪಾ ಶೆಟ್ಟಿ ವಿದೇಶ ಪ್ರವಾಸಕ್ಕೆ ಕೋರ್ಟ್‌ ತಡೆ….!

ಮುಂಬೈ: 

    ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ  ಹಾಗೂ ರಾಜ್‌ ಕುಂದ್ರಾ  ವಿರುದ್ಧ ವಂಚನೆ ಪ್ರಕರಣ  ದಾಖಲಾಗಿದೆ. ಬುಧವಾರ ಬಾಂಬೆ ಹೈಕೋರ್ಟ್, ನಟಿ ಶಿಲ್ಪಾ ಶೆಟ್ಟಿ ಅವರಿಗೆ ಯೂಟ್ಯೂಬ್ ಕಾರ್ಯಕ್ರಮಕ್ಕಾಗಿ ಕೊಲಂಬೊಗೆ ಪ್ರಯಾಣಿಸಲು ಅನುಮತಿ ನಿರಾಕರಿಸಿದ್ದು, ಈ ವಿಷಯವನ್ನು ಪರಿಗಣಿಸುವ ಮೊದಲು ಅವರು 60 ಕೋಟಿ ರೂಪಾಯಿ ಪಾವತಿಸಬೇಕು ಎಂದು ಆದೇಶಿಸಿದೆ. ದಂಪತಿ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ (EOW) ಹೊರಡಿಸಿದ ಲುಕ್ ಔಟ್ ಸುತ್ತೋಲೆ  ಜಾರಿಯಲ್ಲಿದೆ ಎಂದು ನ್ಯಾಯಾಲಯ ಗಮನಿಸಿದ್ದು, ಈ ಕಾರಣದಿಂದಾಗಿ, ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಅನುಮತಿಯಿಲ್ಲದೆ ಅವರು ವಿದೇಶ ಪ್ರವಾಸ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

    ಅಕ್ಟೋಬರ್ 25 ರಿಂದ 29 ರವರೆಗೆ ಕೊಲಂಬೊದಲ್ಲಿ ನಡೆಯಲಿರುವ ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಶಿಲ್ಪಾ ಶೆಟ್ಟಿ ಭಾಗವಹಿಸಬೇಕಾಗಿತ್ತು ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯ ಆಹ್ವಾನ ಕೇಳಿದಾಗ, ವಕೀಲರು ದೂರವಾಣಿ ಮೂಲಕ ಮಾತ್ರ ಮಾತನಾಡಿದ್ದೇವೆ ಮತ್ತು ಪ್ರಯಾಣ ಅನುಮತಿ ನೀಡಿದ ನಂತರವೇ ಔಪಚಾರಿಕ ಆಹ್ವಾನವನ್ನು ಸ್ವೀಕರಿಸುತ್ತೇವೆ ಎಂದು ಹೇಳಿದರು.

   ನ್ಯಾಯಾಲಯವು ವಿನಂತಿಯನ್ನು ತಿರಸ್ಕರಿಸಿತು ಮತ್ತು ಪ್ರಯಾಣ ಅನುಮತಿ ಪಡೆಯುವ ಮೊದಲು ವಂಚನೆ ಆರೋಪಕ್ಕಾಗಿ ದಂಪತಿ, ಮೊದಲು 60 ಕೋಟಿ ರೂಪಾಯಿಗಳನ್ನು ಪಾವತಿಸಬೇಕು ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 14 ಕ್ಕೆ ನಿಗದಿಪಡಿಸಲಾಗಿದೆ. ಕಳೆದ ವಾರವೂ ಸಹ, ಬಾಂಬೆ ಹೈಕೋರ್ಟ್ ಶೆಟ್ಟಿ ಮತ್ತು ಕುಂದ್ರಾ ಅವರ ವಿರುದ್ಧ ಗಂಭೀರ ಪ್ರಕರಣಗಳು ಬಾಕಿ ಇವೆ ಎಂದು ಉಲ್ಲೇಖಿಸಿ ಥೈಲ್ಯಾಂಡ್‌ನ ಫುಕೆಟ್‌ಗೆ ಪ್ರಯಾಣಿಸಲು ಅನುಮತಿ ನಿರಾಕರಿಸಿತು. ಮುಂಬೈ ಪೊಲೀಸರ ಇಒಡಬ್ಲ್ಯೂ ಹೊರಡಿಸಿದ ಎಲ್‌ಒಸಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿತು. 

   ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರವರೆಗೆ ವ್ಯವಹಾರ ವಿಸ್ತರಣೆಗಾಗಿ 60.48 ಕೋಟಿ ರೂ.ಗಳನ್ನು ನೀಡಿದ್ದರು. ಆದರೆ ಕುಂದ್ರಾ ದಂಪತಿ ಅದನ್ನು ತಮ್ಮ ವಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ಆರೋಪಿಸಿದ್ದಾರೆ. 2015 ರಲ್ಲಿ ರಾಜೇಶ್ ಆರ್ಯ ಎಂಬ ಏಜೆಂಟ್ ಮೂಲಕ ದಂಪತಿಯ ಪರಿಚಯವಾಯಿತು ಎಂದು ಕೊಠಾರಿ ಹೇಳಿದ್ದರು. 2015 ಮತ್ತು 2023 ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ಉದ್ಯಮ ವಿಸ್ತರಿಸುವ ಸಂಬಂಧ ಹಣ ಪಡೆದಿದ್ದರು. ಆದರೆ ಅವರು, ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Recent Articles

spot_img

Related Stories

Share via
Copy link