ಮೋದಿ ವಿರುದ್ಧ ಲೇಖನ : ಶಿವಸೇನೆ ಸಂಸದನ ವಿರುದ್ಧ ಪ್ರಕರಣ ದಾಖಲು

ನವದೆಹಲಿ:

          ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪದಡಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಸಂಜಯ್​ ರಾವತ್ ವಿರುದ್ಧ ಯವತ್ಮಾಲ್ ಬಿಜೆಪಿ ಸಂಚಾಲಕ ನಿತಿನ್ ಭೂತಾಡ ಅವರು ನೀಡಿರುವ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

    ಡಿಸೆಂಬರ್ 11 ರಂದು ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನವನ್ನು ಬರೆದಿದ್ದಾರೆ ಎಂದು ಭೂತಾಡಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 (ಎ), 505 (2) ಮತ್ತು 124 (ಎ) ಅಡಿಯಲ್ಲಿ ಉಮರ್ಖೇಡ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.ಈ ಸೆಕ್ಷನ್​ಗಳು ವಿವಿಧ ಗುಂಪುಗಳು ಮತ್ತು ಇತರ ಅಪರಾಧಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂಬುದನ್ನು ಹೇಳುತ್ತವೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap