ಬಾಣಂತಿಯರ ಸಾವು ಪ್ರಕರಣ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ

ಬಳ್ಳಾರಿ:

    ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ  ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ  ಅನುಮಾನ ವ್ಯಕ್ತಪಡಿಸಿದ್ದಾರೆ.

   ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
   ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬಾಣಂತಿಯರ ಸಾವಿಗೆ ಕೇವಲ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣನಾ ಅಥವಾ ಬೇರೆ ಇನ್ನಾವುದಾದರೂ ಕಾರಣ ಇದೆಯಾ ಎಂಬುವುದು ವರದಿ ಬಂದ ಬಳಿಕ ಗೊತ್ತಾಗುತ್ತೆ ಎಂದು ಹೇಳಿದರು.
   
   ಐವರು ಬಾಣಂತಿಯರ ಸಾವಿನಿಂದ ಜನರು ಆತಂಕಗೊಂಡಿದ್ದು, ಬಿಮ್ಸ್​ಗೆ ದಾಖಲಾಗುವ ಗರ್ಭಿಣಿಯರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವ ಗರ್ಭಣಿಯರ ಸಂಖ್ಯೆ ಶೇ 50 ರಷ್ಟು ಕುಸಿತವಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 585 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್​ನಲ್ಲಿ 577 ಗರ್ಭೀಣಿಯರು ದಾಖಲಾಗಿದ್ದರು. ನವೆಂಬರ್ ತಿಂಗಳಲ್ಲಿ 289 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಖ್ಯೆ ಡಿಸೆಂಬರ್​ ತಿಂಗಳಲ್ಲಿ ದಿಢೀರ್​ ಕುಸಿತವಾಗಿದೆ. ಶನಿವಾರ ಡಿಸೆಂಬರ್ 13ನೇ ತಾರೀಖಿನವರಗೆ ಕೇವಲ 80 ಜನ ಗರ್ಭಿಣಿಯರು ದಾಖಲಾಗಿದ್ದಾರೆ.
   ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ, ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ನವೆಂಬರ್​ 9 ರಂದು ಜಿಲ್ಲಾ ಆಸ್ಪತ್ರೆಯಲ್ಲಿ 14 ಬಾಣಂತಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಒಂಬತ್ತು ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದಿತ್ತು. ತಕ್ಷಣ ಏನಾಯಿತು ಅಂತ ಗಮನಿಸುವಷ್ಟರಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು. ನಂದಿನಿ ಹಾಗೂ ಲಲಿತಮ್ಮ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಕೊನೆಯುಸಿರು ಎಳೆದಿದ್ದರು.

 

   ಬಳಿಕ ಉಳಿದ ಏಳು ಬಾಣಂತಿಯರನ್ನು ಬಿಮ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿತ್ತು. ಏಳು ಬಾಣಂತಿಯರಲ್ಲಿ ಬಾಣಂತಿ ರೋಜಮ್ಮ ಬಿಮ್ಸ್​ನಲ್ಲಿ ನವೆಂಬರ್​ 13 ರಂದು ಮೃತಪಟ್ಟಿದ್ದರು. ಅಲ್ಲಿಂದ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ತನಿಖಾ ತಂಡವನ್ನ ಕಳುಹಿಸಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತನಿಖಾ ತಂಡ ಮಾಹಿತಿ ನೀಡಿತ್ತು. ಇದಾದ ಬಳಿಕ ನವೆಂಬರ್​ 25 ರಂದು ಬಾಣಂತಿ ಮುಸ್ಕಾನ್ , ಡಿಸೆಂಬರ್ 5 ರಂದು ಬಾಣಂತಿ ಸುಮಯಾ ಮೃತಪಟ್ಟಿದ್ದಾರೆ.

Recent Articles

spot_img

Related Stories

Share via
Copy link