ಬೆಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬೆರಳಿಗೆ ಗಾಯವಾಗಿದೆ. ವಿಧಾನಸೌಧದ ಸಮಿತಿ ಕೊಠಡಿ 313 ರಿಂದ ಜನಸ್ಪಂದನೆ ಕಾರ್ಯಕ್ರಮ ಬರುತ್ತಿರುವ ವೇಳೆ ಗುಂಡು ಸೂಜಿ ಚುಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಈ ವೇಳೆ ಮುಖ್ಯಮಂತ್ರಿಗಳು ಬೆರಳಿಗೆ ಕರ್ಚೀಫ್ ಸುತ್ತಿಕೊಂಡು ಸಭೆಗೆ ತೆರಳಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ವೈದ್ಯರು ಬೆರಳಿಗೆ ಸಿದ್ದರಾಮಯ್ಯ ತಪಾಸಣೆ ಮಾಡಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದರು.
ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ಕುಸಿದು ಕೂತ ಘಟನೆ ನಡೆದಿತ್ತು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಪ್ರಚಾರಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ಬಳಲಿಕೆಯಿಂದ ಕುಸಿದು ಕೂತ ಘಟನೆ ನಡೆದಿತ್ತು. ಈ ವೇಳೆ ತಕ್ಷಣ ಸ್ಪಂದಿಸಿದ ಅವರ ಗನ್ ಮ್ಯಾನ್, ಅವರನ್ನೆತ್ತಿ ಕಾರಿನಲ್ಲಿ ಕೂರಿಸಿದ್ದರು. ಬಳಿಕ ಅವರಿಗೆ ತಂಪು ಪಾನೀಯ ನೀಡಿ ಆರೈಕೆ ಮಾಡಿದ್ದರು.
