ಸದನದಲ್ಲಿ ಕಳಚಿದ ಸಿದ್ದು ಪಂಚೆ : ನಗೆಗಡಲಲ್ಲಿ ತೇಲಿದ ಸದಸ್ಯರು!!

ಬೆಂಗಳೂರು:

    ಇಂದು ನಡೆಯುತ್ತಿದ್ದ ವಿಧಾನಸಭಾ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಪ್ರಸಂಗ ಕಲಾಪದಲ್ಲಿ ಇರುವವರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.

     ಸದನದ ಕಲಾಪದ ವೇಳೆ ಸಿದ್ದರಾಮಯ್ಯ ಅವರ ಪಂಚೆ ಬಿಚ್ಚಿರುವುದನ್ನು ಗಮನಿಸಿದ ಡಿಕೆ ಶಿವಕುಮಾರ್, ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಹೇಳಿದ್ದಾರೆ. ಆಗ ಸಿದ್ದರಾಮಯ್ಯ ಅವರು, ಯಾಕೋ ಇತ್ತೀಚೆಗೆ ಹೊಟ್ಟೆ ಸ್ವಲ್ಪ ದಪ್ಪ ಆಗಿದೆ. ಪಂಚೆ ಬಿಚ್ಚಿ ಹೋಗಿದೆ. ನಾನು ಪಂಚೆ ಕಟ್ಟಿಕೊಂಡು ಬಂದು ಭಾಷಣವನ್ನು ಮಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಆಗ ಕಲಾಪದಲ್ಲಿ ಇದ್ದವರು ನಗೆಗಡಲಲ್ಲಿ ತೇಲಿದ್ದಾರೆ.

     ಆಗ ಮಧ್ಯ ಪ್ರವೇಶಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ನಮ್ಮ ಅಧ್ಯಕ್ಷರು ಬಂದು ಪಕ್ಷದ ಮಾನ ಎಂದು ಕಿವಿಯಲ್ಲಿ ಗುಟ್ಟಾಗಿ ಹೇಳಿದ್ದಾರೆ. ಆದರೆ ನೀವು ಊರಿಗೆಲ್ಲ ಹೇಳಿಬಿಟ್ಟ್ರಿ. ಅವರ ಶ್ರಮ ವ್ಯರ್ಥವಾಯಿತ್ತು ಎಂದಿದ್ದಾರೆ. ಆಗ ಸದನದಲ್ಲಿ ಇದ್ದವರು ಸಹಾಯಬೇಕಾ ಎಂದು ಕೇಳಿದ್ದಾರೆ. ಆಗ ರಮೇಶ್ ಕುಮಾರ್ ಅವರ ಉದ್ಯೋಗವೇ ನಮ್ಮ ಪಕ್ಷವನ್ನು ಕಳಚೋದು ಆಗಿದೆ. ನೋಡಿ ಹೇಗೆ ಕಾಯುತ್ತಾ ಕುಳಿತ್ತಿದ್ದಾರೆ ಈಶ್ವರಪ್ಪ ಅವರು ಎಂದು ಹಾಸ್ಯ ಚಟಾಕೆ ಹಾರಿಸಿದ್ದಾರೆ.

    ಇಲ್ಲ ಅವರು ಕಳಚಲು ಪ್ರಯತ್ನ ಮಾಡುತ್ತಾರೆ. ಆದರೆ ಸಾಧ್ಯವಾಗಲ್ಲ. ಇತ್ತೀಚೆಗೆ ಹೊಟ್ಟೆ ಸ್ವಲ್ಪ ದಪ್ಪ ಆಗಿದೆ, ಕಳಚಿಕೊಳ್ಳುತ್ತದೆ. ಮೊದಲು ಪಂಚೆ ಕಟ್ಟಿದರೆ ಬಿಚ್ಚಿಕೊಳ್ಳುತ್ತಿರಲಿಲ್ಲ,‌ ಈಗ ಕೊರೋನಾ‌ ಬಂದ ಬಳಿಕ ನಾಲ್ಕೈದು ಕೆಜಿ ಹೆಚ್ಚು ತೂಕ ಬಂದಿದೆ. ಹಾಗಾಗಿ ಪಂಚೆ ಬಿಚ್ಚಿಕೊಳ್ಳುತ್ತದೆ, ಅದಕ್ಕೆ ಯಾವಾಗಲೂ ಜುಬ್ಬಾ ಹಾಕಿಕೊಳ್ಳೋದು. ಬಹಳಷ್ಟು ಮಂದಿ ಲುಂಗಿನೂ ಹಾಕಲ್ಲ, ಧೋತಿನೂ ಉಟ್ಟುಕೊಳ್ಳುವುದಿಲ್ಲ, ಪ್ಯಾಂಟೂ ಹಾಕೊಳ್ಳುವುದಿಲ್ಲ, ನಿಲುವಂಗಿ ಹಾಕಿಕೊಳ್ಳುತ್ತಾರೆ ಎಂದು ಪಂಚೆ ಬಿಚ್ಚಿಕೊಂಡಿದ್ದಕ್ಕೆ ನಗುತ್ತಾ ಸಿದ್ದರಾಮಯ್ಯ ಉತ್ತರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap