ವಿಕಲ ಚೇತನ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸಿದ ಶಾಸಕ

 ಬರಗೂರು : 

      ಗ್ರಾಮ ವಾಸ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಗೋಪಿಕುಂಟೆ ನವಗ್ರಾಮದ ಡಾ.ಸಿ.ಎಂ.ರಾಜೇಶ್‍ಗೌಡ ಅವರು ಶಾಸಕರ ಅನುದಾನದಲ್ಲಿ ದ್ವಿಚಕ್ರ ವಾಹನವನ್ನು ಕೊಡಿಸಿಕೊಡುವುದಾಗಿ ಭರವಸೆ ನೀಡಿದರು.

     ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ದೊಡ್ಡಬಾಣಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಲು ತೆರಳುತ್ತಿರುವ ವೇಳೆ ಗೋಪಿಕುಂಟೆ ನವಗ್ರಾಮದ ಮುಖ್ಯ ರಸ್ತೆ ಮೂಲಕ ಶಾಸಕರು ಬರುವುದನ್ನು ಗಮನಿಸಿ ಅವರ ಗಮನ ಸೆಳೆದ ವಿಕಲಚೇತನ ರಂಗನಾಥ್ ಶಾಸಕರಲ್ಲಿ ಸಂಚರಿಸಲು ದ್ವಿಚಕ್ರ ವಾಹನ ಕಲ್ಪಿಸಿಕೊಡಬೇಕೆಂದು ಕೇಳಿಕೊಂಡರು. ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ತಮ್ಮ ಅನುದಾನದಲ್ಲಿ ದ್ವಿಚಕ್ರ ವಾಹನ ಕಲ್ಪಿಸಿಕೊಡುವುದಾಗಿ ತಿಳಿಸಿದರು. ಹಾಗೂ ನವಗ್ರಾಮದಲ್ಲಿ ಬೀದಿ ದೀಪಗಳ ವ್ಯವಸ್ತೆ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಮನವಿ ಮಾಡಿಕೊಂಡಾಗ ಕೂಡಲೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ತಿಳಿಸಿ ಶೀಘ್ರದಲ್ಲೆ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳನ್ನು ಅಳವಡಿಸುವಂತೆ ತಾಕೀತು ಮಾಡಿದರು. ಹಾಗೂ ಹಲವು ಮಂದಿಗೆ ಪಿಂಚಣಿ ಸೌಲಭ್ಯ ಇಲ್ಲದಿರುವ ಬಗ್ಗೆ ತಿಳಿದು, ಕೂಡಲೇ ಕಂದಾಯ ಅಧಿಕಾರಿಗಳಿಗೆ ಕರೆ ಮಾಡಿ ತುರ್ತಾಗಿ ಗೋಪಿಕುಂಟೆ ಹಾಗೂ ನವಗ್ರಾಮಗಳಲ್ಲಿನ ಪಿಂಚಣಿ ಫಲಾನುಭವಿಗಳನ್ನು ಗುರ್ತಿಸಿ ಸೌಲಭ್ಯವನ್ನು ಒದಗಿಸುವಂತೆ ತಿಳಿಸಿದರು.

      ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಗೌರಮ್ಮ ನರಸಿಂಹಪ್ಪ, ಉಪಾಧ್ಯಕ್ಷ ರಾಜಣ್ಣ, ಪಟ್ಟನಾಯಕನಹಳ್ಳಿ ಪಿಎಸ್‍ಐ ಭಾಸ್ಕರ್, ಮುಖಂಡರಾದ ಪ್ರಕಾಶ್‍ಗೌಡ, ಚಂಗಾವರ ಮಾರಣ್ಣ, ಮಾಜಿ ಜಿಪಂ ಸದಸ್ಯ ಗುಜ್ಜಾರಪ್ಪ, ಶ್ರೀಧರ್, ನರಸಪ್ಪ, ಉಮೇಶ್ ಇತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link