ಅಬಕಾರಿ ನೀತಿ ಪ್ರಕರಣ : ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ:

   ದೆಹಲಿ ಸರ್ಕಾರದ ಮಾಜಿ ಅಬಕಾರಿ ಸಚಿವ ಹಾಗೂ ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ ಅವರನ್ನು ಮಾರ್ಚ್‌ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್‌ ಆದೇಶ ನೀಡಿದೆ .

    ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು 14 ದಿನಗಳ ಅಂದರೆ ಮಾರ್ಚ್ 20 ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ರದ್ದುಪಡಿಸಲಾಗಿರುವ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿಸೋಡಿಯಾ ಅವರನ್ನು ಸಿಬಿಐ ಕಳೆದ ಭಾನುವಾರ ಬಂಧಿಸಿತ್ತು. ಅಂತೆಯೇ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ಈ ವೇಳೆ ನಡೆದ ವಾದ-ಪ್ರತಿವಾದದ ವೇಳೆ ಸಿಬಿಐ ಪರ ವಕೀಲರು, ಈ ಹಂತದಲ್ಲಿ, ನಾವು ಸಿಸೋಡಿಯಾ ಅವರ ಹೆಚ್ಚಿನ ಸಿಬಿಐ ಬಂಧನ ಅವಧಿಯನ್ನು ಬಯಸುವುದಿಲ್ಲ ಆದರೆ ಮುಂದಿನ 15 ದಿನಗಳಲ್ಲಿ ನಾವು ಅದನ್ನು ಕೋರಬಹುದು ಎಂದರು. ಹೀಗಾಗಿ ಕೋರ್ಟ್ ಮುಂದಿನ 14 ದಿನಗಳ ಕಾಲ ಸಿಸೋಡಿಯಾಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಇನ್ನು 14 ದಿನಗಳ ನ್ಯಾಯಾಂಗ ಬಂಧನದ ಹಿನ್ನಲೆಯಲ್ಲಿ ಮನೀಷ್ ಸಿಸೋಡಿಯಾ ಜೈಲಿಗೆ ತಮ್ಮ ಡೈರಿ-ಪೆನ್ನು, ಕನ್ನಡಕ ಮತ್ತು ಭಗವದ್ಗೀತೆ ಪುಸ್ತಕವನ್ನು ಒಯ್ಯಲು ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾದೀಶರಾದ ಎಂಕೆ ನಾಗ್‌ಪಾಲ್ ಅವರು ಅನುಮತಿ ನೀಡಿದರು. ಅಲ್ಲದೆ ಸಿಸೋಡಿಯಾ ಅವರಿಗೆ ವೈದ್ಯರು ಶಿಫಾರಸ್ಸು ಮಾಡಿದ್ದ ಔಷಧಿಗಳನ್ನು ಒಯ್ಯಲೂ ಕೋರ್ಟ್ ಅನುಮತಿ ನೀಡಿದ್ದು, ಈ ಔಷಧಿಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಲು ಕೋರ್ಟ್ ಅನುಮತಿ ನೀಡಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap