ಬೆಂಗಳೂರು:
ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಪ್ರಾರಂಭದ ನಂತರ ಸೇವಾ ಸಿಂಧು ಪೋರ್ಟಲ್ ಮೇಲಿನ ಹೊರೆ ಸದ್ಯಕ್ಕೆ ಕಡಿಮೆಯಾಗಿರುವುದರಿಂದ, ‘ಶಕ್ತಿ ಕಾರ್ಡ್’ಗಳನ್ನು ನೀಡುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗುತ್ತದೆ ಮತ್ತು ಈ ಕಾರ್ಡ್ಗಳು ಜೀವಿತಾವಧಿಗೆ ಮಾನ್ಯವಾಗಿರುತ್ತವೆ ಮತ್ತು ಯಾವುದೇ ನವೀಕರಣದ ಅಗತ್ಯವಿಲ್ಲ ಎನ್ನಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಜೊತೆಗೆ ಮಾತನಾಡಿ, ‘ಇಷ್ಟು ದಿನ, ಸೇವಾ ಸಿಂಧು ಪೋರ್ಟಲ್ ಅಧಿಕಾರಿಗಳು ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳಿಗೆ ಅರ್ಜಿಗಳನ್ನು ಸ್ವೀಕರಿಸುವಲ್ಲಿ ನಿರತರಾಗಿದ್ದರು. ಶಕ್ತಿ ಯೋಜನೆಯಡಿ ಸುಮಾರು ಮೂರು ಕೋಟಿ ಫಲಾನುಭವಿಗಳಿದ್ದು, ಅವರಿಗೆ ಶಕ್ತಿ ಕಾರ್ಡ್ ವಿತರಿಸುವುದು ಸುಲಭದ ಮಾತಲ್ಲ. ಪೋರ್ಟಲ್ ಈಗ ಹೊರೆಯಿಂದ ಕೊಂಚ ಮುಕ್ತವಾಗಿರುವುದರಿಂದ, ನಾವು ಶಕ್ತಿ ಕಾರ್ಡ್ಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ’ ಎಂದರು.
ಬಸ್ ನಿಗಮಗಳು ನೀಡುವ ಬಸ್ ಪಾಸ್ಗಳಂತೆಯೇ ಶಕ್ತಿ ಸ್ಮಾರ್ಟ್ ಕಾರ್ಡ್ಗಳು ಕೇವಲ ಗುರುತಿನ ಚೀಟಿಯಾಗಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಎಂಡಿ ಅನ್ಬು ಕುಮಾರ್ ಈ ಹಿಂದೆ ಟಿಎನ್ಐಇಗೆ ಖಚಿತಪಡಿಸಿದ್ದರು. ಆದರೆ, ಸಾಮಾನ್ಯ ಪಾಸ್ಗಳಂತೆ ಪ್ರತಿ ವರ್ಷ ಕಾರ್ಡ್ಗಳನ್ನು ನವೀಕರಿಸಬೇಕೆಂದು ಮಹಿಳೆಯರು ಆತಂಕಕ್ಕೊಳಗಾಗಿದ್ದರು.
![](https://prajapragathi.com/wp-content/uploads/2023/08/ramalingareddy-1.jpg)