ಮೈಸೂರು:
ಸೋಲಿಗ ಬುಡಕಟ್ಟು ಸಮುದಾಯದ ಮಾದಮ್ಮ ಅವರನ್ನು ಚಾಮರಾಜನಗರ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ . ಇತ್ತೀಚೆಗೆ ಹನೂರು ತಾಲೂಕಿನ ಜೀರಿಗೆ ದೊಡ್ಡಿ ಗ್ರಾಮಕ್ಕೆ ವಿದ್ಯುತ್ ಪೂರೈಕೆಗಾಗಿ ಹೋರಾಟ ನಡೆಸಿ ಸುದ್ದಿಯಾಗಿದ್ದರು. ವಸತಿ ಸಚಿವ ವಿ.ಸೋಮಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಅವರ ಗ್ರಾಮಕ್ಕೆ ವಿದ್ಯುತ್ ಪೂರೈಕೆಯಾಗಿದೆ.
ಜಿಲ್ಲಾಡಳಿತವು ಅವರನ್ನು ಚುನಾವಣಾ ರಾಯಭಾರಿಯನ್ನಾಗಿ ಮಾಡುವುದರೊಂದಿಗೆ, ಶಾಲಾ ಶಿಕ್ಷಕಿ ಮತ್ತು ಪಂಚಾಯತ್ ಅಧಿಕಾರಿಗಳು ಮಾದಮ್ಮ ಅವರಿಗೆ ನಾಲ್ಕು ಗಂಟೆಗಳ ಕಾಲ ತರಬೇತಿ ನೀಡಿ ಮತದಾನದ ಮಹತ್ವ ಹಾಗೂ, ಮತದಾರರಿಗೆ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿರುವ ವಿಡಿಯೋ ರೆಕಾರ್ಡ್ ಮಾಡಿದರು.
![](https://prajapragathi.com/wp-content/uploads/2023/04/Untitled-4-3.jpg)