ಬೆಂಗಳೂರು :
ಪೌರತ್ವ ತಿದ್ದುಪಡಿ ಕಾಯ್ದೆ ಪರ ನಡೆದ ಪ್ರತಿಭಟನೆ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎನ್ನುವ ಮಾಹಿತಿಯನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.
ಡಿ.22 ರಂದು ಬೆಂಗಳೂರಿನ ಟೌನ್ ಹಾಲ್ ಬಳಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ಪ್ರತಿಭಟನೆ ವೇಳೆ ಇಂಡಿಯಾ ಫಾರ್ ಸಿಎಎ ಕಾರ್ಯಕರ್ತ ವರುಣ್ ಮೇಲೆ 6 ಮಂದಿ ಎಸ್ಡಿಪಿಐ ಕಾರ್ಯಕರ್ತರು ಜನರ ಮೇಲೆ ಹಲ್ಲೆ ನಡೆಸಿದ್ದರು. ಈ 6 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಸಾಧಿಕ್ ಪಾಷಾ, ಇರ್ಪಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಹಾಗೂ ಸನಾ ಎಂದು ಗುರುತಿಸಲಾಗಿದೆ.
2 ಬೈಕ್ಗಳಲ್ಲಿ ಬಂದಿದ್ದ ಆರೋಪಿಗಳು ವರುಣ್ ಮೇಲೆ ರಾಡ್ ಹಾಗೂ ಲಾಂಗ್ಗಳಿಂದ ಹಲ್ಲೆ ಮಾಡಿದ್ದರು. ಈ ಆರೋಪಿಗಳ ವಿಚಾರಣೆಯಲ್ಲಿ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದ್ದು, ವರುಣ್ ಇವರ ಟಾರ್ಗೆಟ್ ಆಗಿರಲಿಲ್ಲವಂತೆ. ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಅವರು ಮಾತನಾಡಿದ್ದಕ್ಕೆ ಅವರನ್ನು ಮುಗಿಸಲು ಈ 6 ಮಂದಿ ಉಪಾಯ ಮಾಡಿದ್ದರು ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/sulibele-tejaswi-surya.gif)