6 ಉಗ್ರರ ಎನಕೌಂಟರ್!!

ಶ್ರೀನಗರ:

      ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್​ ಭಾಗದಲ್ಲಿ ನಡೆದ ಉಗ್ರರು ಹಾಗೂ ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಆರು ಮಂದಿ ಉಗ್ರರನ್ನು ಭಾರತೀಯ ಸೇನೆ ಶನಿವಾರ ಹೊಡೆದುರುಳಿಸಿದೆ.

      ಐಜಿಪಿ ಸ್ವಯಂ ಪ್ರಕಾಶ್‌ ಅವರು ತ್ರಾಲ್‌ ಎನ್‌ಕೌಂಟರ್‌ನಲ್ಲಿ ಯೋಧರು 6 ಉಗ್ರರನ್ನು ಕೊಂದಿರುವುದನ್ನು ದೃಢಪಡಿಸಿದ್ದು, ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಸೇನೆ ತ್ರಾಲ್​ ಪ್ರದೇಶವನ್ನು ಸುತ್ತುವರಿದು 6 ಮಂದಿ ಉಗ್ರರನ್ನು ಸದೆಬಡಿದಿದೆ. ಅಲ್ಲದೆ, ಶಸ್ತ್ರಾಸ್ತ್ರಗಳು ಹಾಗೂ ಯುದ್ಧ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap