ಎಸ್‍ಎಸ್‍ಎಲ್‍ಸಿ ಪ್ರಶ್ನೆಪತ್ರಿಕೆ ಮುದ್ರಣ, ಗೌಪ್ಯ ಕಾರ್ಯ ವೆಚ್ಚದಲ್ಲಿ ಅಪರತಪರಾ, ಬಿಲ್ವಿದ್ಯೆ: ವರದಿ ಬಹಿರಂಗ

ಬೆಂಗಳೂರು:

2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿಯಲ್ಲಿ ಪ್ರಶ್ನೆಪತ್ರಿಕೆ ಮುದ್ರಣ , ಗೌಪ್ಯ ಕಾರ್ಯ ವೆಚ್ಚದ ಹೆಸರಿನಲ್ಲಿ 10,01,98,217 ರು . ವೆಚ್ಚ ಮಾಡಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಗೌಪ್ಯ ವೆಚ್ಚಗಳ ಪಾವತಿಗೆ ಸಂಬಂಧಿಸಿದಂತೆ ಶಾಸನಬದ್ಧ ಕಟಾವಣೆ ಹೊರತುಪಡಿಸಿ 9,78,31,883 ರು ಪಾವತಿಯಾಗಿರುವ ಬಿಲ್‍ಗಳು ನಿಖರವಾಗಿಲ್ಲ ಎಂಬ ಅಂಶವನ್ನು ಲೆಕ್ಕಪರಿಶೋಧಕರು ಬಹಿರಂಗಪಡಿಸಿದ್ದಾರೆ .

2020-21ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾಮಂಡಳಿಯ ಲೆಕ್ಕಪರಿಶೋಧನೆ ವರದಿಯು ಮಂಡಳಿಯು ಮಾಡಿರುವ ಹಲವು ವೆಚ್ಚಗಳಿಗೆ ಸಂಬಂಧಿಸಿದಂತೆ ಪಾವತಿಯಾಗಿರುವ ಬಿಲ್‍ಗಳ ನಿಖರತೆ ಸ್ಪಷ್ಟಪಡಿಸಲು ಸಾಧ್ಯವಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ . ಈ ವರದಿಯ ಪ್ರತಿ ‘ ದಿ ಫೈಲ್’ಗೆ ಲಭ್ಯವಾಗಿದೆ . ಈ ಅವಧಿಯಲ್ಲಿ ಎಸ್ ಸುರೇಶ್‍ಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದರು .

ಪ್ರಶ್ನೆಪತ್ರಿಕೆ ಮುದ್ರಣ ಮತ್ತು ಗೌಪ್ಯ ಕಾರ್ಯಗಳ ವೆಚ್ಚಕ್ಕೆ ಸಂಬಂಧಿಸಿದಂತೆ 2020 ರ ಜುಲೈ 8 ಕ್ಕೆ ಕ್ರಮ ಸಂಖ್ಯೆ 1 ರಲ್ಲಿ 7,26,08 , 754 ರು . ಇದ್ದರೆ ಈ ಪೈಕಿ ಜಿಎಸ್‍ಟಿ 14,52,176 ಮತ್ತು ಟಿಡಿಎಸ್ 14,52,176 ರು ಕಡಿತಗೊಳಿಸಿದ ನಂತರ 6 , 97 , 04 , 402 ರು . ನಿವ್ವಳ ಮೊತ್ತವಿತ್ತು . ಅದೇ ರೀತಿ ಕ್ರಮ ಸಂಖ್ಯೆ 2 ರಲ್ಲಿ 2020 ರ ಜುಲೈ 8 ರಂದು 91,32,440 ರು.ಗೆ 1,82,650 ರು . ಜಿಎಸ್‍ಟಿ ಮತ್ತು 1,82,650 ರು ಟಿಡಿಎಸ್ ಭರಿಸಿದ ನಂತರ 87,67,140 ನಿವ್ವಳ ಮೊತ್ತವಿತ್ತು .

2020 ರ ಆಗಸ್ಟ್ 26 ರಂದು 46,72,883 ರು.ಗೆ ಸಂಬಂಧಿಸಿದಂತೆ 93,458 ರು . ಜಿಎಸ್‍ಟಿ ಮತ್ತು 83,458 ರು . ಟಿಡಿಎಸ್ ಕಡಿತಗೊಳಿಸಿದ ನಂತರ 44,85,967 ರು . ನಿವ್ವಳ ಮೊತ್ತವಿತ್ತು . 2020 ರ ಅಕ್ಟೋಬರ್ 1 ರಂದು 1,54,94,140 ರು.ಗೆ 3,09,983 ರು ಜಿಎಸ್‍ಟಿ , 3,09,983 ರು . ಟಿಡಿಎಸ್ ಕಡಿತಗೊಳಿಸಿದ ನಂತರ 1,48 , 74 , 373 ರು.ನಿವ್ವಳ ಮೊತ್ತವಿತ್ತು ಎಂಬುದು ಲೆಕ್ಕಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ .

ಗೌಪ್ಯ ಕಾರ್ಯಗಳಿಗೆ ಮಾಡಿರುವ ವೆಚ್ಚಕ್ಕೆ ದಾಖಲೆಗಳನ್ನು ವಿನಾಯಿತಿ ‘ ಗೌಪ್ಯ ಕಾರ್ಯಗಳಿಗೆ ಸಂಬಂಧಿಸಿದಂತೆ ಲೆಕ್ಕಪರಿಶೋಧನೆಯಿಂದ ಇರುವುದರಿಂದ ಲೆಕ್ಕ ತನಿಖೆಗೆ ಮಂಡಳಿಯು ಕೋರಿತ್ತು . ಈ ಗೌಪ್ಯ ವೆಚ್ಚಗಳ ಪಾವತಿಗೆ ಸಂಬಂಧಿಸಿದಂತೆ ಶಾಸನಬದ್ಧ ಕಟಾವಣೆಗಳನ್ನು ಹೊರತುಪಡಿಸಿ ಬಾಕಿ ಮೊತ್ತ 9,78,31,983 ರು ಪಾವತಿಯಾಗಿರುವ ಬಿಲ್‍ಗಳ ಪಾವತಿಯ ಬಗ್ಗೆ ನಿಖರತೆ ಸ್ಪಷ್ಟಪಡಿಸಲು ಸಾಧ್ಯವಾಗಿರುವುದಿಲ್ಲ ‘ ಲೆಕ್ಕಪರಿಶೋಧಕರು ವರದಿಯಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ .

ಎಂದು ಇನ್ನು 2020-21ನೇ ಸಾಲಿಗೆ ಸಂಬಂಧಿಸಿದಂತೆ ಎಸ್‍ಎಸ್‍ಎಲ್‍ಸಿ ಮಂಡಳಿಯು ಸ್ವೀಕರಿಸಿರುವ ಶುಲ್ಕ ( ಬ್ಯಾಂಕ್ ಚಲನ್ ) ಹಾಗೂ ಪರೀಕ್ಷೆ ಕಟ್ಟಿರುವ ವಿದ್ಯಾರ್ಥಿಗಳ ಸಂಖ್ಯೆ , ಶಾಲೆ ವಿವರಗಳನ್ನು ಮಂಡಳಿಯು ತಾಳೆ ಮಾಡುತ್ತಿಲ್ಲ ಮತ್ತು ಸಮನ್ವಯಗೊಳಿಸುತ್ತಿಲ್ಲ ಎಂಬ ಅಂಶ ಲೆಕ್ಕಪರಿಶೋಧನೆ ವರದಿಯಿಂದ ಗೊತ್ತಾಗಿದೆ .

ಮಂಡಳಿಯಲ್ಲಿ ಲೆಕ್ಕವಿಭಾಗ ಮತ್ತು ಕಂಪ್ಯೂಟರ್ ವಿಭಾಗಗಳು ಪ್ರತ್ಯೇಕ ರೀತಿ ಕಾರ್ಯನಿರ್ವಹಿಸುತ್ತಿದೆ . ಹಾಗೂ ವ್ಯತ್ಯಾಸಗಳು ಕಂಡು ಬರುತ್ತದೆ . ಸ್ವೀಕೃತಿ ಮೊತ್ತ ವಿದ್ಯಾರ್ಥಿಗಳ ಸಂಖ್ಯೆ ವಿವರಗಳ ಸಮನ್ವಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ , ಶುಲ್ಕ ಕಟ್ಟಿದ , ಮರು ಪಾವತಿ ಬಗ್ಗೆ ವಿವರಗಳ ಬಗ್ಗೆ ಪೂರ್ಣ ಮಾಹಿತಿ ದೊರಕಿರುವುದಿಲ್ಲ ; ಎಂದು ವರದಿಯಲ್ಲಿ ಹೇಳಲಾಗಿದೆ .

ಹಾಗೆಯೇ ಮುಖ್ಯ ಪರೀಕ್ಷೆ , ಪೂರಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ನೋಂದಣಿಯಾದ ಸಂಖ್ಯೆ ಸಂಖ್ಯೆ ಹಾಜರಾದ ವಿದ್ಯಾರ್ಥಿಗಳ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಸಂಖ್ಯೆ ಸಾಮಾನ್ಯ ವರ್ಗ ( ಶುಲ್ಕ ವಸೂಲಾತಿ ) , ಎಸ್‍ಸಿ ಎಸ್ ಟಿ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ವಿವರಗಳನ್ನು ಸರಿಯಾಗಿ ದಾಖಲಿಸಿಲ್ಲ . ಗಣಕ ಯಂತ್ರ ವಿಭಾಗದಿಂದ ನೋಂದಣಿಯಾದ ವಿದ್ಯಾರ್ಥಿಗಳ ಮತ್ತು ಶಾಲೆ ವಿವರಗಳ ಮಾಹಿತಿಯನ್ನು ಪೂರ್ಣರೀತಿಯಲ್ಲಿ ನಿರ್ವಹಿಸಿಲ್ಲ ಎಂಬುದು ವರದಿಯಿಂದ ತಿಳಿದು ಬಂದಿದೆ .

ಮೌಲ್ಯಮಾಪಕರಿಗೆ ಸಂಭಾವನೆ , ದಿನಭತ್ಯೆ ಪ್ರಯಾಣ ಭತ್ಯೆಗಳನ್ನು ವಿತರಿಸುವಾಗಲೂ ಹಲವು ನ್ಯೂನತೆಗಳನ್ನು ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದಾರೆ . ಮಂಡಳಿಯ ಅಧಿಕಾರಿಗಳು , ನೌಕರರುಗಳೀಗೆ ಪ್ರಯಾಣ ಭತ್ಯೆ ದಿನಭತ್ಯೆ ಸಂಭಾವನೆ ಪಾವತಿಯ ಕೇಮ್ ಮಾಡುತ್ತಿರುವ ಕಿ.ಮೀ. ದೂರಕ್ಕೆ ಸಂಬಂಧಿಸಿದಂತೆ ನಿಗದಿತ ದೂರದ ಬಗ್ಗೆ ವಾಸ್ತವಾಂಶದ ಬಗ್ಗೆ ತಿಳಿಯಲು ಸಾಧ್ಯವಾಗಿಲ್ಲ ಎಂದು ಲೆಕ್ಕಪರಿಶೋಧಕರು ವರದಿಯಲ್ಲಿ ತಿಳಿಸಿದ್ದಾರೆ .

‘ ಕೆಲವು ಮೌಲ್ಯಮಾಪಕ ವೇತನ ಪ್ರಮಾಣ ಪತ್ರ ಮತ್ತು ಬಿಡುಗಡೆ ಆದೇಶದ ಪತ್ರ ಇರುವುದಿಲ್ಲ . ಇದರಿಂದ ಅವರ ಪ್ರಯಾಣ ಭತ್ಯೆ ನೀಡುವ ವರ್ಗದ ಬಗ್ಗೆ ತಿಳಿಯಲು ಸಾಧ್ಯವಾಗಿರುವುದಿಲ್ಲ . ಕೆಲವೊಂದು ಬಿಲ್‍ಗಳಲ್ಲಿ ಪ್ರವಾಸ ತಂಗುವಿಕೆಯ ದಿನಾಂಕ ಮತ್ತು ವೇಳೆಯನ್ನು ನಮೂದಿಸಿಲ್ಲ . ಸವಿವರವಾಗಿ ಹೀಗಾಗಿ ವಾಸ್ತವವಾಗಿ ಇವರಿಗೆ ನೀಡಬೇಕಿರುವ ದಿನಭತ್ಯೆ ಪ್ರವಾಸ ಭತ್ಯೆಗಳ ಲೆಕ್ಕಾಚಾರ ಮಾಡಲು ಸಾಧ್ಯವಾಗಿಲ್ಲ ‘ ಎಂದು ಲೆಕ್ಕಪರಿಶೋಧಕರು ಅಭಿಪ್ರಾಯಿಸಿದ್ದಾರೆ .

ಇನ್ನು ಹಲವು ಬಿಲ್‍ಗಳಲ್ಲಿ ಮೌಲ್ಯಮಾಪಕರು ಯಾವ ಶಾಲೆಯಿಂದ ಹಾಗೂ ಯಾವ ಸ್ಥಳದಿಂದ ಆಗಮಿಸಿದ್ದಾರೆ ಎಂಬುದಕ್ಕೆ ಯಾವುದೇ ದೃಢೀಕರಣವಿರುವುದಿಲ್ಲ . ಇದರಿಂದ ಯಾವ ಆಧಾರದ ಮೇಲೆ ಮೌಲ್ಯಮಾಪಕರಿಗೆ ಸ್ಥಳೀಯ ಭತ್ಯೆ ನೀಡಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬ ಅಂಶವು ವರದಿಯಲ್ಲಿದೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap