ಬೆಂಗಳೂರು:
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಿಂದ ರಾಜ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ಬಸ್ ನಲ್ಲಿ ಕರೆದೊಯ್ಯಲಾಯಿತು.
ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಂಧನಕ್ಕೆ ಹೆದರುವ ಮಕ್ಕಳು ನಾವಲ್ಲ, ಹೋರಾಟದ ಕಿಚ್ಚು ಕಾಂಗ್ರೆಸ್ ಕುಟುಂಬದ ರಕ್ತದಲ್ಲಿ ಹರಿಯುತ್ತಿದೆ. ದಲಿತರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟದ ಕೂಗು ನಿಲ್ಲದು ಎಂದು ಎಚ್ಚರಿಕೆ ನೀಡಿದರು.
![](https://prajapragathi.com/wp-content/uploads/2023/03/Untitled-15.jpg)