ಕಾರವಾರ :
ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದರು.
ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್ಗೆ ಆಗಮಿಸಿದರು. ಈ ಸಮಯದಲ್ಲಿ ಕಾಮಗಾರಿಗಳ ವೈಮಾನಿಕ ಸಮೀಕ್ಷೆ ಮಾಡಿದರು.
ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು. ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು.
Visited Karwar Naval Base today to review the progress of ongoing infrastructure development under ‘Project Seabird’. I am confident that after the completion of this project, the Karwar Naval Base would become Asia's largest and most efficient Naval base. pic.twitter.com/8z6QcST4QM
— Rajnath Singh (@rajnathsingh) June 24, 2021
ನಂತರ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ಮಾತುಕತೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/06/Rajnath-singh-karwar.jpg)