ಬೆಂಗಳೂರು :
ನಾಳೆಯಿಂದ(ಜೂ.25) ರಾಜ್ಯದ 8 ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ. ಎಸಿ ಬಸ್ ಸಂಚಾರ ಸೇವೆ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು, ಮೊದಲ ಹಂತದಲ್ಲಿ ಬೆಂಗಳೂರಿನಿಂದ, ಮೈಸೂರು, ಮಂಗಳೂರು, ಕುಂದಾಪುರ, ಚಿಕ್ಕಮಗಳೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ,ವಿರಾಜಪೇಟೆ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ. ಯ ಎಸಿ ಬಸ್ ಸಂಚಾರ ನಾಳೆಯಿಂದ(ಜೂ.15) ಆರಂಭಗೊಳ್ಳಲಿದೆ ಎಂಬುದಾಗಿ ತಿಳಿಸಿದೆ.
ಕೊರೋನಾ ಸೋಂಕಿನ ಭೀತಿಯಿಂದಾಗಿ ಎಸಿ ಬಸ್ ಸಂಚಾರವನ್ನು ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಕೆ ಎಸ್ ಆರ್ ಟಿ ಸಿ ನಿಲ್ಲಿಸಿತ್ತು. ಲಾಕ್ ಡೌನ್ ಸಡಿಲಿಕೆಯ ನಂತ್ರ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಹಂತ ಹಂತವಾಗಿ ಆರಂಭ ಕೂಡ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿತ್ತು. ಇದೀಗ ಮೊದಲ ಹಂತವಾಗಿ ನಾಳೆಯಿಂದ ಕೆಲ ಜಿಲ್ಲೆಗಳಿಗೆ ಕೆ.ಎಸ್.ಆರ್.ಟಿ.ಸಿ. ಎಸಿ ಬಸ್ ಸಂಚಾರ ಸೇವೆ ಆರಂಭಗೊಳ್ಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/KSRTC-bus-ac.jpg)