ಬೆಳಗಾವಿ :
ಒಂದೇ ಕುಟುಂಬ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.
ಪ್ರವೀಣ್ ಶೆಟ್ಟಿ(37) , ಪತ್ನಿ ರಾಜೇಶ್ವರಿ (27) ಮಕ್ಕಳಾದ ಅಮೃತ (8) ಹಾಗೂ ಅದ್ವಿತ್ (6) ಮೃತ ದುರ್ದೈವಿಗಳು.
ಪ್ರವೀಣ್ ಶೆಟ್ಟಿ ಮತ್ತು ರಾಜೇಶ್ವರಿ ತಮ್ಮ ಮಕ್ಕಳಿಗೆ ಕ್ರಿಮಿನಾಶಕ ಕುಡಿಸಿ ಹತ್ಯೆಗೈದು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ರಾಮದುರ್ಗಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
