ಬೆಂಗಳೂರು :
ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ಇಲಾಖೆ ಆದೇಶ ನೀಡಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಪಟ್ಟ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ತಿಳಿಸಿ ಆದೇಶಿಸಿದೆ.
ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ಈ ಮೂಲಕ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ಬಾರಿ ಪಾಸ್ ಮಾಡಿದೆ.
ಇನ್ನು ಮೇ.1 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ನೀಡಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷ ಜುಲೈ.15 ರಿಂದ ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/School-children.gif)