ಬೆಂಗಳೂರು:
ರಾಜ್ಯದಲ್ಲಿ ಇಂದು ಒಂದೇ ದಿನ ಬೆಳಗ್ಗೆಯವರೆಗೆ 10 ಮಂದಿ ಕೋರೋನಾ ಸೋಂಕಿತರು ಪತ್ತೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.
ಕಳೆದ ನಿನ್ನೆ ರಾಜ್ಯದಲ್ಲಿ 16 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಇಂದು ಮತ್ತೆ 10 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಅದರಲ್ಲಿ ಬೆಂಗಳೂರಿನ 4 ಜನರಿಗೆ, ಮೈಸೂರಿನ 5 ಜನರಿಗೆ ಮತ್ತು ಕಲಬುರ್ಗಿಯ ಒಬ್ಬರಿಗೆ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ ಹೊಸದಾಗಿ ಶುಕ್ರವಾರ 5 ಮಂದಿಯಲ್ಲಿ ಕೋವಿಡ್–19 ಕಾಣಿಸಿಕೊಂಡಿದೆ. ಇದರಲ್ಲಿ 8 ವರ್ಷದ ಒಂದು ಮಗು ಸಹ ಸೇರಿದೆ. ಇವರೆಲ್ಲರೂ ನಂಜನಗೂಡಿನ ಔಷಧ ತಯಾರಿಕಾ ಕಂಪನಿಯ ಉದ್ಯೋಗಿಗಳು, ಅವರ ಕುಟುಂಬದವರೇ ಆಗಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಒಂದು ವೇಳೆ ರಾಜ್ಯದಲ್ಲಿ ಲಾಕ್ ಡೌನ್ ತೆರವುಗೊಳಿಸಿದರೆ, ಸೋಂಕಿತರ ಸಂಖ್ಯೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/corona-agencies.gif)