ಬಿಸಿಯೂಟ ಸೇವಿಸಿ ಬಾಲಮಂದಿರದ 103 ಮಕ್ಕಳು ಅಸ್ವಸ್ಥ!!

ಬೆಂಗಳೂರು : 

     ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ರಾತ್ರಿ ಊಟ ಸೇವಿಸಿದ 105 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

      ಫುಡ್ ​​ಪಾಯಿಸನ್​ನಿಂದ 103 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿದ‌ ಬಳಿಕ ಮಕ್ಕಳಿಗೆ ವಾಂತಿ ಶುರುವಾಗಿದೆ. ಅಸ್ವಸ್ಥ ಮಕ್ಕಳಿಗೆ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಮಕ್ಕಳು ಚಿಂತಾಜನ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

      ಈ ವೇಳೆ ಫುಡ್ ಪಾಯ್ಸನ್ ನಿಂದಾಗಿ ಘಟನೆ  ಆಗಿರುವುದು ಬೆಳಕಿಗೆ ಬಂದಿದೆ. ಬಾಲಮಂದಿರದಲ್ಲಿ ಆಹಾರಕ್ಕೆ ವಿಷಕಾರಿ ಪದಾರ್ಥ ಅಥವಾ ಹಲ್ಲಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link