ಕ್ರೇನ್ ಕುಸಿದು ಬಿದ್ದು 11 ಮಂದಿ ದುರ್ಮರಣ!!

ವಿಶಾಖಪಟ್ಟಣಂ: 

     ಭೀಕರ ಕ್ರೇನ್​ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ನಡೆದಿದೆ.

     ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿದ್ದಾಗ ಇದ್ದಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ಜಾರೆ. ಅಲ್ಲದೆ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

      ಪ್ರಸ್ತುತ ಕ್ರೇನ್ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ. 

      ಘಟನೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap