ಚಿಕ್ಕಬಳ್ಳಾಪುರ:
ಪಬ್ ಜಿ ಗೇಮ್ ಆಡಲು ಮೊಬೈಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚೇಳೂರು ತಾಲ್ಲೂಕಿನ ಮಂಡ್ಯಂಪಲ್ಲಿಯಲ್ಲಿ ನಡೆದಿದೆ.
ಯಶ್ವಂತ್(15) ಮೃತ ದುರ್ದೈವಿ. ಈತ ತನ್ನ ಅಕ್ಕ ಅಖಿಲಳ ಬಳಿ ಗೇಮ್ ಆಡಲು ಮೊಬೈಲ್ ಕೇಳಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿದ ಅಕ್ಕ ಹೆಚ್ಚು ಮೊಬೈಲ್ ಬಳಸಬಾರದು ಎಂದು ಬುದ್ಧಿ ಮಾತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯಶ್ವಂತ್ ಗಿಡಗಳಿಗೆ ಸಿಂಪಡಿಸಲು ತಂದಿಟ್ಟಿದ್ದ ಕೀಟನಾಶಕ ಸೇವಿಸಿದ್ದಾನೆ.
ವಿಷಯ ತಿಳಿದ ಕೂಡಲೇ ಆತನನ್ನು ಚೇಳೂರು ಸರ್ಕಾರಿ ಆಸ್ಪತ್ರೆಗೆ ಕೊಂಡೊಯುವ್ವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
