ನವದೆಹಲಿ :
ಕೇಂದ್ರ ಸರ್ಕಾರ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ನಲ್ಲಿ ಬೆಂಗಳೂರಿಗೆ ಬಿಗ್ ಗಿಫ್ಟ್ ನೀಡಲಾಗಿದೆ.
ಈ ವೇಳೆ ‘ಬೆಂಗಳೂರಿನ ಉಪನಗರ ರೈಲು ಯೋಜನೆಗೆ ಒತ್ತು ನೀಡಲಾಗಿದೆ. ಮೆಟ್ರೊ ಮಾದರಿಯಲ್ಲಿ ರೂ18,600 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಪೈಕಿ ಶೇ 20ರಷ್ಟು ಮೊತ್ತ ಕೇಂದ್ರದ ಸಹಾಯಧನವಾಗಿರಲಿದ್ದು, ಶೇ 50ರಷ್ಟು ಹೊರಗಿನ ನೆರವು ಒದಗಿಸಲು ಭರವಸೆ ನೀಡಲಾಗುತ್ತದೆ ಎಂದು ಹೇಳಿದರು.
ಇದಲ್ಲದೆ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ವೇ ಆರಂಭವಾಗಲಿದ್ದು, ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇ 2023ಕ್ಕೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/16BG-SUBURBANTRAINS.gif)