ಕೊಪ್ಪ:
ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಕುದುರೆಗುಂಡಿ ಬಳಿ ಶನಿವಾರ ಮುಂಜಾನೆ ನಡೆದಿದೆ.
ಮೃತರನ್ನು ಕೊಪ್ಪ ಪಟ್ಟಣದ ಆರೀಫ್ ಸಾಬ್ ಮತ್ತು ಅವರ ಅಕ್ಕನ ಮಗ ನಾಸೀರ್ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಕೊಪ್ಪ ಬಾಳಗಡಿಯ ಅಭಿಮಾನ್ ಲೇಔಟ್ ಮಾಲೀಕ ಆರೀಫ್ ಸಾಬ್ ಮತ್ತು ಅವರ ಅಳಿಯ ತಮ್ಮ ಕ್ವಿಡ್ ಕಾರ್ ನಲ್ಲಿ ಬರುತ್ತಿದ್ದಾಗ ಎದುರುಗಡೆಯಿಂದ ಬಂದ ಇನ್ನೋವಾ ಕಾರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಘಟನೆಯಲ್ಲಿ ನಾಸೀರ್ ಸ್ಥಳದಲ್ಲೇ ಮೃತ ಪಟ್ಟಿದ್ದು ಆರೀಫ್ ಸಾಬ್ ಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಇನ್ನೋವಾ ಚಾಲಕ ಸ್ವಾಮಿ ಎಂಬವರಿಗೆ ಗಂಭೀರ ಗಾಯ ಗಳಾಗಿದ್ದು ಕೊಪ್ಪ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಿ ಕೊಡಲಾಯಿತು.
ಈ ಸಂಬಂಧ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ಸ್ಥಳ ಪರಶೀಲನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
