ಟ್ರಾಕ್ಟರ್ ಗೆ ಬಸ್ ಡಿಕ್ಕಿ : ಇಬ್ಬರ ದುರ್ಮರಣ!!

ಬಳ್ಳಾರಿ:

      ಬೆಂಗಳೂರಿನಿಂದ ಗಂಗಾವತಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಟ್ರಾಕ್ಟರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

      ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 53ರ ಹಾರುವನಹಳ್ಳಿ ಕೋಳಿ ಫಾರಂ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಹೊಸಪೇಟೆ ತಾಲೂಕಿನ ಚಿಲಕನಹಟ್ಟಿಯ ಯರಿಸ್ವಾಮಿ(30) ಹಾಗೂ ರೇಣುಕಮ್ಮ(30) ಎಂದು ಗುರುತಿಸಲಾಗಿದೆ.

     ಘಟನೆಯಲ್ಲಿ ಸುಮಾರು 28 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಹೊಸಪೇಟೆಯ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

      ಹಾರುವನಹಳ್ಳಿ ಹಾಗೂ ಚಿಲಕನಹಟ್ಟಿಯಿಂದ ನರೇಗಾ ಕೆಲಸಕ್ಕೆಂದು ಜನರು ಎಂದಿನಂತೆ ಟ್ರಾಕ್ಟ್ರರ್‍ನಲ್ಲಿ ಹೊರಟಾಗ ಈ ದುರ್ಘಟನೆ ಸಂಭವಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap