ಉಡುಪಿ:
ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಪ್ರಕರಣ ಸಂಬಂಧ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜನವರಿ 8ರಂದು ತಮಿಳುನಾಡಿನ ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ಬಳಿ ಪೊಲೀಸ್ ಅಧಿಕಾರಿ ವಿಲ್ಸನ್ ಎಂಬುವರನ್ನು ಹತ್ಯೆಗೈಯಲಾಗಿತ್ತು.
ಅದೇ ಉಗ್ರರು ಕೇರಳ ಮೂಲಕ ಕರ್ನಾಟಕದ ಕರಾವಳಿಗೆ ಆಗಮಿಸಿರುವ ಮಾಹಿತಿ ದೊರೆತಿದ್ದು, ಇಂದು ನಸುಕಿನ ವೇಳೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಉಡುಪಿಯಲ್ಲಿ ಬಂಧಿತರಾಗಿರುವ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಅವರೂ ವಿಲ್ಸನ್ ಹತ್ಯೆಗೈದಿದ್ದ ಆರೋಪಿಗಳಾಗಿದ್ದರು. ಆರೋಪಿಗಳು ನೇಪಾಳ ಮೂಲಕ ವಿದೇಶಕ್ಕೆ ಹಾರಲು ಸಿದ್ಧರಾಗಿದ್ದರು ಎಂಬ ಮಾಹಿತಿ ದೊರೆತಿದೆ.
ಬಂಧಿತರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆದ್ರೆ ಪೊಲೀಸರು ಅಧಿಕೃತವಾಗಿ ಶಂಕಿತ ಉಗ್ರರ ಬಂಧನದ ಬಗ್ಗೆ ಮಾಹಿತಿ ನೀಡಿಲ್ಲ.
ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯನ್ನು ಕೊಲೆಗೈದ ಬಳಿಕ ಕೇರಳ ಮೂಲಕ ರಾಜ್ಯದ ಕರಾವಳಿ ತೀರಕ್ಕೆ ಬಂದಿದ್ದರು ಎಂದು ಶಂಕಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/Udupi-terrorist.gif)