ಬೆಂಗಳೂರು :
ರಾಜ್ಯದಲ್ಲಿ ಇಂದು 22 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 557 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಒಬ್ಬರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ಬೆಳಗಾವಿಯ 14 ಜನರಿಗೆ, ತುಮಕೂರಿನ ಒಬ್ಬರಿಗೆ, ಬೆಂಗಳೂರಿನ ಮೂವರಿಗೆ ಹಾಗೂ ದಾವಣಗೆರೆಯ ಒಬ್ಬರಿಗೆ ಕೊರೋನಾ ಕೇಸ್ ಪತ್ತೆಯಾಗಿದೆ.
ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Coronna.gif)