ಬಳ್ಳಾರಿ : ಬೊಲೆರೋ – ಲಾರಿ ಅಪಘಾತ ; 3 ಯುವಕರ ದುರ್ಮರಣ!!!

ಬಳ್ಳಾರಿ:

      ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

      ಬುಸ್ಸಿ (21), ದಾದಾ ಕಲಂದರ (31), ಅಸ್ಲಾಂ (25) ಮೃತ ದುರ್ದೈವಿಗಳು. ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳೆಂದು ಗುರುತಿಸಲಾಗಿದೆ.

      ಇನ್ನು ಘಟನೆಯಲ್ಲಿ ಪರಶುರಾಮ (28) ಮತ್ತು ಮನ್ಸೂರ್ (30) ಎಂಬುವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಯಶವಂತ‌ ನಗರದಿಂದ ತೋರಣಗಲ್ಲಿನ‌ ಜಿಂದಾಲ್ ಉಕ್ಕು ಕಾರ್ಖಾನೆಗೆ ಹೋಗುತ್ತಿರುವಾಗ ಈ ಅಪಘಾತ ಸಂಭಿಸಿದೆ. ಈ ದುರಂತದಿಂದ ದೀಪಾವಳಿ ಪಾಡ್ಯ ದಿನದಂದು ಗಣಿನಾಡು ಬಳ್ಳಾರಿಯಲ್ಲಿ ಸೂತಕ ಛಾಯೆ ಆವರಿಸಿದೆ.

      ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap