ಹಾಸನ :
ಕಂಟೇನರ್ ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ- ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದೆ.
ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದಾಗ ಮಂಗಳೂರಿನತ್ತ ಹೊರಟಿದ್ದ ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/accident.gif)