ಒಎನ್‌ಜಿಸಿ ಘಟಕದಲ್ಲಿ ಅಗ್ನಿ ಅವಘಡ : 4 ಮಂದಿ ಸಾವು!!

ಮುಂಬೈ:

      ವಾಣಿಜ್ಯ ನಗರಿ ಮುಂಬೈನ ಒಎನ್’ಜಿಸಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 4 ಮಂದಿ ಕಾರ್ಮಿಕರು ದುರ್ಮರಣವಕ್ಕೀಡಾಗಿರುವ ಘಟನೆ ಮಂಗಳವಾರ ನಡೆದಿದೆ.

      ಸಂಸ್ಕರಣಾ ಘಟಕದ ಮಳೆ ನೀರು ಕಾಲುವೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಲ್ಲಿ ಕೆಲ ಸಿಬ್ಬಂದಿಗಳಿಗೂ ಕೂಡ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

      ಅಗ್ನಿಶಾಮಕದಳದವರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ ಕೊಂಡಿದೆ.   ಅವಘಡಕ್ಕೆ ಪ್ರಮುಖ ಕಾರಣ ತಿಳಿದುಬಂದಿಲ್ಲ.

      ಅಗ್ನಿ ಅವಘಡವನ್ನು ಖಚಿತಪಡಿಸಿರುವ ಒಎನ್’ಜಿಸಿ ಅಧಿಕಾರಿಗಳು, ಸಂಸ್ಕರಣಾ ಘಟಕದಲ್ಲಿ ಇಂದು ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದೆ.  ಇದು ತೈಲ ಸಂಸ್ಕರಣೆ ಮೇಲೆ ಇದು ಪರಿಣಾಮ ಬೀರುವುದಿಲ್ಲ. ಈಗಾಗಲೇ ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಅನಿಲವನ್ನು ಗುಜರಾತಿನ ಹಜರಿಯಾ ಘಟಕದತ್ತ ತಿರುಗಿಸಲಾಗಿದೆ ಎಂದು ಕಂಪನಿ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap