ಮಂಡ್ಯ : ಪಕ್ಕದ ಮನೆ ಯುವಕನಿಂದಲೇ ವೃದ್ಧನ ಕೊಲೆ!!

ಮಂಡ್ಯ :  

      ಪಕ್ಕದ ಮನೆ ಯುವಕನೇ ವೃದ್ಧನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

      ಗ್ರಾಮದ ಚೆನ್ನವೀರಯ್ಯ(72) ಮೃತ ವೃದ್ಧ. ಈತನನ್ನು ಅದೇ ಗ್ರಾಮದ ಮೋಹನ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

      ಮೋಹನ್ ಹಾಗೂ ವೃದ್ಧನ ಇಬ್ಬರ ಅಕ್ಕಪಕ್ಕದಲ್ಲಿದೆ. ಈ ಕುಟುಂಬಗಳ ನಡುವೆ ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿತ್ತು ಎನ್ನಲಾಗಿದೆ.

      ಬುಧವಾರ ರಾತ್ರಿ ಚೆನ್ನವೀರಯ್ಯ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮೋಹನ್ ತಾಯಿಯನ್ನು ನಿಂದಿಸಿದ್ದಾನೆ. ಈ ವಿಚಾರ ತಿಳಿದ ಮೋಹನ್, ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಚೆನ್ನವೀರಯ್ಯನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

     ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ವೃತ್ತ ನಿರೀಕ್ಷಕ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap