ಬೆಂಗಳೂರು :
ರಾಜ್ಯದಲ್ಲಿ ಇಂದು 8 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 701 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ದಾವಣಗೆರೆಯಲ್ಲಿ 3 ಮಂದಿ, ಕಲ್ಬುರ್ಗಿಯಲ್ಲಿ 3, ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿಸಿದೆ.
Covid19: Morning Bulletin
Total Confirmed Cases: 701
Deceased: 30
Recovered:363
New Cases:08#KarnatakaFightsCorona #IndiaFightsCorona pic.twitter.com/IwVFB6ciXr— B Sriramulu (@sriramulubjp) May 7, 2020
ಈ ಮೂಲಕ ಸೋಂಕಿತರ ಸಂಖ್ಯೆ 701 ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ 692 ಮಂದಿ ಸೋಂಕಿತರ ಪೈಕಿ 363 ಮಂದಿ ಗುಣಮುಖರಾಗಿದ್ದು, 338 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ