ಬೆಳ್ತಂಗಡಿ:
ಶಾಲೆಯ ಬಾವಿ ನೀರು ಕುಡಿದು 8 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಶಿಬಾಜೆ ಪೆರ್ಲ ಎಂಬಲ್ಲಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಪೆರ್ಲ ಎಂಬಲ್ಲಿರುವ ಸರಕಾರಿ ಉನ್ನತೀಕರಿಸಿದ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಚೇತನ್ ಕುಮಾರ್(13), 8ನೇ ತರಗತಿಯ ಸುದೀಶ್(14), ಯೋಗೀಶ್ (14), ರಾಧಾಕೃಷ್ಣ(14), 6ನೇ ತರಗತಿಯ ಸುದೀಪ್(12), ರಾಜೇಶ್ (12), ಮೋನಿಸ್( 12) ಹಾಗೂ ಶ್ರವಣ್(12) ಅಸ್ವಸ್ಥಗೊಂಡ ವಿದ್ಯಾರ್ಥಿಗಳು.
ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳ ಪೈಕಿ ಗಂಭೀರಾವಸ್ಥೆಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಬಾವಿ ನೀರಿಗೆ ಯಾರೋ ದುಷ್ಕರ್ಮಿಗಳು ವಿಷ ಬೆರೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಾವಿಗೆ ಯಾರೋ ದುಷ್ಕರ್ಮಿಗಳು ವಿಷ ಸೇವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
