ಹಾಸನ:
![](https://prajapragathi.com/wp-content/uploads/2020/01/accident-bus.gif)
ಕೆಎಸ್ಆರ್ಟಿಸಿ ಬಸ್ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅರಸೀಕೆರೆ-ತಿಪಟೂರು ರಸ್ತೆಯ ಸೂಳೆಕೆರೆ ಗೇಟ್ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಒಂಟೆಕಲ್ಲಟ್ಟಿ ಗ್ರಾಮದ ಬಸವರಾಜ್ (48), ಕಬ್ಬಿನಕೆರೆ ಗ್ರಾಮದ ಯಲ್ಲಯ್ಯ (70) ಹಾಗೂ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಬಿದರೆ ಗ್ರಾಮದ ಟೆಂಪೋ ಟ್ರ್ಯಾಕ್ಸ್ ಚಾಲಕ ರಮೇಶ್ (24) ಮೃತ ದುರ್ದೈವಿಗಳು
ಇನ್ನು ದುರಂತದಿಂದಾಗಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎರಡೂ ವಾಹನಗಳ ಚಾಲಕರ ಅತಿಯಾದ ವೇಗವೇ ಘಟನೆಗೆ ಕಾರಣ ಎಂಬುದು ಪ್ರತ್ಯಕ್ಷದರ್ಶಿಗಳ ಮಾತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/accident-bus.gif)