ಮೂಡುಬಿದಿರೆ : ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ!!

ಮೂಡುಬಿದಿರೆ :

      ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಂದಲೆ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

    ಮೂಡಬಿದ್ರೆಯ ಕಡಂದಲೆ ನಿವಾಸಿ ಧನಂಜಯ ಪೂಜಾರಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.   ಮುಂಬೈಯಲ್ಲಿ ಹೋಟೆಲ್ ಕೆಲಸದಲ್ಲಿದ್ದರು ಎಂದು ತಿಳಿದುಬಂದಿದೆ.

       ಬುಧವಾರ ರಾತ್ರಿ ಇಬ್ಬರು ಸಹೋದರರ ಜೊತೆಗೆ ಮೂಡುಬಿದಿರೆಗೆ ಬಂದಿದ್ದರು. ಊರಿಗೆ ಬಂದವರನ್ನು ತಡರಾತ್ರಿ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಮುಂಜಾನೆ 3 ಗಂಟೆಯ ಹೊತ್ತಿಗೆ ಶಾಲೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

      ಒಂದು ವೇಳೆ ಕೋವಿಡ್-19 ದೃಢವಾದರೆ ಮುಂದಿನ ಜೀವನೋಪಾಯ ಕಷ್ಟವೆಂಬ ಭಯದಿಂದ ಧಂಜಯ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗ್ತಿದೆ. ಮೃತರು ಪತ್ನಿ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

     ಸ್ಥಳಕ್ಕೆ ಉಪವಿಭಾಗಧಿಕಾರಿ ಮದನ. ಮೋಹನ್ ಸಿ ಭೇಟಿ ನೀಡಿದ್ದು, ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap