ಚಿಕ್ಕಬಳ್ಳಾಪುರ : ಕಾರಿಗೆ ಲಾರಿ ಡಿಕ್ಕಿ ; ಓರ್ವ ಸಾವು

ಚಿಕ್ಕಬಳ್ಳಾಪುರ :

      ಮಗಳ ಐಎಎಸ್ ತರಬೇತಿಗಾಗಿ ಹೈದರಬಾದ್​ಗೆ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಪರಿಣಾಮ ತಂದೆ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

     ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಮಂಜುನಾಥ್ ಅಯ್ಯರ್ (45) ಎಂದು ತಿಳಿದು ಬಂದಿದೆ. ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯ ಗುತ್ತಿಗೆದಾರರಾಗಿದ್ದ ಮಂಜುನಾಥ್ ಅಯ್ಯರ್ ತಮ್ಮ ಮಗಳಾದ ಕಾವ್ಯಾರನ್ನ ಐಎಎಸ್ ಕೋಚಿಂಗ್‍ಗೆ ಹೈದರಾಬಾದ್‍ಗೆ ಬಿಟ್ಟು ಬರಲು ತೆರಳುತ್ತಿದ್ದರು.

     ಆಂಧ್ರ ಪ್ರದೇಶದ ಅನಂತಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ ಅಯ್ಯರ್​ರವರ ತಲೆ ಭಾಗಕ್ಕೆ ಹೆಚ್ಚಿನ ಪೆಟ್ಟು ಬಿದ್ದಿದ್ದು, ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

      ಅಪಘಾತದಲ್ಲಿ ಕಾರು ಚಾಲಕ ಯಲ್ಲಪ್ಪ, ಮಗಳು ಕಾವ್ಯ ಹಾಗೂ ಕೆಲಸದಾಳುವಿನ ಮಗ ವಿನಯ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

     ಅನಂತಪುರ ಜಿಲ್ಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap